ವಿಮಾನದಲ್ಲಿ ಬಾಂಬ್ ಬೆದರಿಕೆ : ಕೆಂಪೇಗೌಡ ಏರ್ಪೊರ್ಟ್ ಹೈ ಅಲರ್ಟ್!
LATEST NEWSಬೆಂಗಳೂರುಅಪರಾಧಬೆಂಗಳೂರು ಗ್ರಾಮಾಂತರ
S3 Media House
8/26/20261 min read


ಲಖನೌ ನಿಂದ ಬೆಂಗಳೂರಿಗೆ ಆಗಮಿಸುತ್ತಿದ್ದ 6ಇ-231 ವಿಮಾನದಲ್ಲಿ ಬಾಂಬ್ ಇದೆ ಎಂಬ ಬೆದರಿಕೆ ಪತ್ರ ಸಿಕ್ಕಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನಲ್ಲಿರುವ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಟ್ಟೆಚ್ಚರ ವಹಿಸಲಾಗಿದ್ದು, ಹೈ ಅಲರ್ಟ್ ಘೋಷಿಸಲಾಗಿದೆ. ಅನಾಮಧೇಯ ವ್ಯಕ್ತಿಯಿಂದ ಬಾಂಬ್ ಬೆದರಿಕೆ ಬಂದಿದ್ದು, ಏರ್ಪೋರ್ಟ ಟರ್ಮಿನಲ್ ಮ್ಯಾನೇಜರ್ ಸೇರಿದಂತೆ ಪ್ರಮುಖರು ತುರ್ತು ಸಭೆ ನಡೆಸುತ್ತಿದ್ದಾರೆ. ಜೊತೆಗೆ ಏರ್ಪೋರ್ಟ ನಲ್ಲಿ ಭದ್ರತೆ ಹೆಚ್ಚಲ ಮಾಡಲಾಗಿದೆ.


