ಹನೂರು ಎನ್ಕೌಂಟರ್ ಪ್ರಕರಣ ಸಿಐಡಿ ಗೆ ವರ್ಗಾವಣೆ!

LATEST NEWSಬೆಂಗಳೂರುಅಪರಾಧರಾಜ್ಯ

S3 Media House

8/25/20261 min read

ರಾಜ್ಯದಲ್ಲಿ ಸಾಕಷ್ಟು ಸುದ್ದಿಯಾಗಿದ್ದು ಚಾಮರಾಜನಗರ ಜಿಲ್ಲೆಯ ಹನೂರು ಎನ್​ಕೌಂಟರ್​ ಪ್ರಕರಣವನ್ನು ಸಿಐಡಿಗೆ ವರ್ಗಾವಣೆ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಸಿಐಡಿ ವಿಶೇಷ ಘಟಕದಿಂದ ಮುಂದಿನ ತನಿಖೆ ನಡೆಯಲಿದ್ದು, ಈ ಸಂಬಂಧ ಡಿಜಿಐಜಿಪಿ ಎಂ. ಸಲೀಂ ಚಾಮರಾಜನಗರ ಎಸ್​​ಪಿ ಗೆ ಸೂಚನೆ ನೀಡಿದ್ದಾರೆ.

ಶೂಟೌಟ್​ಗೆ ಸಂಬಂಧಿಸಿದಂತೆ ನಾಲ್ಕು ಎಫ್​ಐಆರ್​ ದಾಖಲಾಗಿದ್ದು, ನಾಲ್ವರು ಇನ್ಸಪೆಕ್ಟರ್​ಗಳು ಕೂಡಲೇ ಪ್ರಕರಣಕ್ಕೆ ಸಂಬಂಧಿಸಿದ ದಾಖಲೆಗಳನ್ನು ಕೂಡಲೇ ಸಿಐಡಿಗೆ ನೀಡುವಂತೆ ಎಂ. ಸಲೀಂ ಆದೇಶ ಹೊರಡಿಸಿದ್ದಾರೆ. ಚಾಮರಾಜನಗರದ ರಾಮಪುರಂ ಪೊಲೀಸ್ ಠಾಣೆ, ಹನೂರು ಪೊಲೀಸ್ ಠಾಣೆಯಲ್ಲಿ ಎರಡು ಪ್ರಕರಣಗಳು ಹಾಗೂ ಕೊಳ್ಳೇಗಾಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣಗಳು ದಾಖಲಾಗಿದ್ದವು.

ನಮ್ಮನ್ನು ಸಂಪರ್ಕಿಸಲು ದಯವಿಟ್ಟು ಈ ವಿವರಗಳನ್ನು ಬಳಸಿ

s3kannadanews@gmail.com

+91 9902544556

© 2026 S3 Media House. All Rights Reserved.

ನಮ್ಮ ನ್ಯೂಸ್ ಅಪ್ಡೇಟ್ಗಳಿಗಾಗಿ ಸಬ್ಸ್ಕ್ರೈಬ್ ಮಾಡಿ

ನಮ್ಮ ವಾಟ್ಸ್ ಆಪ್ ಚಾನೆಲ್ ಗೆ ಸೇರಲು ಈ ಬಟನ್ ಕ್ಲಿಕ್ ಮಾಡಿ ಕ್ಷಣ ಕ್ಷಣದ ಆಪ್ಡೆಟ್ ಪಡೆಯಿರಿ.