ಶಾಸಕ ವಿನಯ್ ಕುಲಕರ್ಣಿಗೆ ಬಿಗ್ ರಿಲೀಫ್!
ರಾಜ್ಯLATEST NEWS
8/25/20261 min read


ಶಾಸಕ ವಿನಯ್ ಕುಲಕರ್ಣಿಗೆ ನ್ಯಾಯಾಲಯ ಇಂದು ಬಿಗ್ ರಿಲೀಫ್ ನೀಡಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಬಿಗ್ ರಿಲೀಫ್ ನೀಡಿದ್ದು, ಧಾರವಾಡಕ್ಕೆ ಎಂಟ್ರಿ ಕೊಡಬಾರದು ಎಂದಿದ್ದು ಷರತ್ತನ್ನು ಸಡಿಲಗೊಳಿಸಿ ಆದೇಶ ಹೊರಡಿಸಿದೆ.
ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿ ಸಾಕ್ಷ್ಯ ನಾಶ ಮಾಡುವ ಸಂಭವವಿದೆ ಎಂದು ಭಾವಿಸಿದ್ದ ನ್ಯಾಯಾಲಯ ಧಾರವಾಡಕ್ಕೆ ಎಂಟ್ರಿ ಕೊಡುವುದು ತಡೆ ಹಿಡಿದಿತ್ತು. ಈ ಆದೇಶವನ್ನು ರದ್ದು ಮಾಡಬೇಕು ಎಂದು ಕುಲಕರ್ಣಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ದಾವೆ ಹೂಡಿದ್ದರು. ಈ ಬಗ್ಗೆ ವಿಚಾರಣೆ ನಡೆಸಿದ ಕೋರ್ಟ್ ಧಾರವಾಡಕ್ಕಿದ್ದ ನೋ ಎಂಟ್ರಿಯನ್ನು ರದ್ದು ಮಾಡಿ ಆದೇಶ ಹೊರಡಿಸಿದೆ. ಇದರಿಂದ ವಿನಯ್ ಕುಲಕರ್ಣಿಗೆ ಬಿಗ್ ರಿಲೀಫ್ ಸಿಕ್ಕಿದಂತಾಗಿದೆ.


