ನೆಲಮಂಗಲ ಬೊಮ್ಮನಹಳ್ಳಿ ಟೋಲ್ ಬಳಿ ಮತ್ತೆ ನವಿಲು ಸಾವು; ಸ್ಥಳೀಯರಲ್ಲಿ ಆತಂಕ
ಪದೇ ಪದೇ ನವಿಲುಗಳು ಸಾವಿಗೀಡಾಗುತ್ತಿರುವ ಹಿನ್ನೆಲೆಯಲ್ಲಿ ಪರಿಸರ ಪ್ರೇಮಿಗಳು ಹಾಗೂ ಸ್ಥಳೀಯ ನಿವಾಸಿಗಳು ಕಳವಳ
ಸಾರ್ವಜನಿಕ ಸಮಸ್ಯೆಗಳುಪರಿಸರLATEST NEWSಬೆಂಗಳೂರು ಗ್ರಾಮಾಂತರ
S3 Media House
8/2/20261 min read


ನೆಲಮಂಗಲ ತಾಲೂಕಿನ ಬೊಮ್ಮನಹಳ್ಳಿ ಟೋಲ್ ಬಳಿ ಮತ್ತೆ ರಾಷ್ಟ್ರೀಯ ಪಕ್ಷಿ ನವಿಲು ಸಾವಿಗೀಡಾದ ಘಟನೆ ವರದಿಯಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.
ಇದೇ ಪ್ರದೇಶದಲ್ಲಿ ಪದೇ ಪದೇ ನವಿಲುಗಳು ಸಾವಿಗೀಡಾಗುತ್ತಿರುವ ಹಿನ್ನೆಲೆಯಲ್ಲಿ ಪರಿಸರ ಪ್ರೇಮಿಗಳು ಹಾಗೂ ಸ್ಥಳೀಯ ನಿವಾಸಿಗಳು ಕಳವಳ ವ್ಯಕ್ತಪಡಿಸಿದ್ದಾರೆ. ಇತ್ತೀಚಿನ ಘಟನೆ ಬಳಿಕ ಮತ್ತೊಂದು ನವಿಲು ಸತ್ತಿರುವುದು ಗಮನಕ್ಕೆ ಬಂದಿದ್ದು, ಇದು ನಿರಂತರವಾಗಿ ನಡೆಯುತ್ತಿರುವುದರಿಂದ ಜನರಲ್ಲಿ ಆತಂಕ ಹೆಚ್ಚಾಗಿದೆ.
ಕೆಲವರು ಈ ಸಾವುಗಳು ಹಕ್ಕಿಜ್ವರ (ಬರ್ಡ್ ಫ್ಲೂ) ಕಾರಣವಾಗಿರಬಹುದೇ ಎಂಬ ಶಂಕೆ ವ್ಯಕ್ತಪಡಿಸಿದ್ದಾರೆ. ಆದರೆ ಇದನ್ನು ಇನ್ನೂ ಅಧಿಕೃತವಾಗಿ ದೃಢೀಕರಿಸಲಾಗಿಲ್ಲ.
ಘಟನೆಯ ಕುರಿತು ನೆಲಮಂಗಲ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿದ್ದು, ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುವ ಕಾರ್ಯ ಆರಂಭವಾಗಿದೆ ಎಂದು ತಿಳಿದುಬಂದಿದೆ.
ನವಿಲುಗಳ ನಿರಂತರ ಸಾವುಗಳ ಹಿನ್ನೆಲೆ, ಸಂಬಂಧಪಟ್ಟ ಅರಣ್ಯ ಹಾಗೂ ಪಶುಸಂಗೋಪನಾ ಇಲಾಖೆ ಅಧಿಕಾರಿಗಳು ತಕ್ಷಣ ಸೂಕ್ತ ಕ್ರಮ ಕೈಗೊಳ್ಳಬೇಕು ಹಾಗೂ ಕಾರಣವನ್ನು ಪತ್ತೆಹಚ್ಚಬೇಕು ಎಂದು ಸ್ಥಳೀಯರು ಮನವಿ ಮಾಡಿದ್ದಾರೆ.
ಪರಿಸರ ಸಂರಕ್ಷಣಾ ಸಂಘಟನೆಗಳು ಕೂಡ ಈ ಘಟನೆಗೆ ಗಂಭೀರವಾಗಿ ಗಮನಹರಿಸಿ, ನವಿಲುಗಳ ರಕ್ಷಣೆಗಾಗಿ ತುರ್ತು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿವೆ.


