ಪರಮಾಪ್ತ ಅಂದ್ರೆ ಏನು? ಜಮೀರ್ ವಿರುದ್ಧ ಸಿದ್ದರಾಮಯ್ಯ ಗರಂ!
ದಾವಣಗೆರೆ ರಾಜಕೀಯದ ಗುಟ್ಟು ಬಿಚ್ಚಿಟ್ಟ ಸಿದ್ದರಾಮಯ್ಯ: ಜಮೀರ್ ವಿರುದ್ಧ ಗಂಭೀರ ಆರೋಪ
ರಾಜಕೀಯ
S3 Media House
6/11/20261 min read


ಜಮೀರ್ ಅಹ್ಮದ್ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸ್ಫೋಟಕ ಹೇಳಿಕೆ ಇದೀಗ ಚರ್ಚೆಗೆ ಗ್ರಾಸವಾಗಿದೆ.
ಜಮೀರ್ ಅವರಿಗೆ ಸಚಿವ ಸ್ಥಾನ ನೀಡುವಂತೆ ಮನವಿ ಮಾಡಲು ಬಂದಿದ್ದ ಬೆಂಬಲಿಗರ ಜೊತೆ ಮಾತನಾಡಿದ ವೇಳೆ, ಸಿದ್ದರಾಮಯ್ಯ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.
"ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ" ಎಂದು ಜಮೀರ್ ವಿರುದ್ಧ ಸಿದ್ದರಾಮಯ್ಯ ಹೇಳಿದ್ದಾರೆ. ಈ ವೇಳೆ ಜಮೀರ್ ಬೆಂಬಲಿಗರು, "ಜಮೀರ್ ಅವರು ನಿಮ್ಮ ಪರಮಾಪ್ತರು ಅಲ್ವಾ ಸರ್?" ಎಂದು ಪ್ರಶ್ನಿಸಿದ್ದಾರೆ.
ಇದಕ್ಕೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, "ಪರಮಾಪ್ತ ಆಗಿಬಿಟ್ಟರೆ ಏನು? ನನ್ನ ವಿರುದ್ಧ ದಾವಣಗೆರೆಯಲ್ಲಿ ಕೆಲಸ ಮಾಡಿದ್ದಾನೆ" ಎಂದು ಖಾರವಾಗಿ ಹೇಳಿದ್ದಾರೆ. ಸಿದ್ದರಾಮಯ್ಯ ಅವರ ಈ ಹೇಳಿಕೆ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.


